ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ತಾತ ತೀರಿಕೊಂಡ 2 ಗಂಟೆಯಲ್ಲಿ ಮೊಮ್ಮಗನಿಗೆ ಅಪಘಾತ : ಸಾವಿನಲ್ಲೂ ಒಂದಾದ ಅಜ್ಜ ಮೊಮ್ಮಗ

ಕುಂದಾಪುರ : ಅಜ್ಜ ಮೊಮ್ಮಗನ ನಡುವೆ ಅತಿಯಾದ ಪ್ರೀತಿ ವಿಶ್ವಾಸ. ಮನೆಯಲ್ಲಿದ್ದಾಗ ಅಜ್ಜ ಮೊಮ್ಮಗ ಒಬ್ಬರನ್ನೊಬ್ಬರು ಬಿಟ್ಟಿರುತ್ತಿರಲಿಲ್ಲ. ಆದರೇ ಅದ್ಯಾರ ದೃಷ್ಟಿ ಬಿತ್ತೋ ಗೊತ್ತಿಲ್ಲ. ಅಜ್ಜ ವಯೋಸಹಜ ಸಾವನ್ನಪ್ಪಿದ್ದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ ಅತೀ ಹಚ್ಚಿಕೊಂಡಿದ್ದ ಮೊಮ್ಮಗ ಸಾವನ್ನಪ್ಪಿದ ಘಟನೆ ನಡೆದಿದೆ.

ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ ವಾಸವಿದ್ದ ನಾರಾಯಣ ಪೂಜಾರಿ ನಿವೃತ್ತ ಶಿಕ್ಷಕ. ಅವರ ಮಗಳ ಮಗ ನಿಶಾಂತ‌ ಪೂಜಾರಿ (23) ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ.

ಕಳೆದ ವಾರವಷ್ಟೆ ಊರಿಗೆ ಬಂದಿದ್ದ ನಿಶಾಂತನಿಗೆ ಸೋಮವಾರ ಪರೀಕ್ಷೆ ಇದ್ದಿದ್ದರಿಂದ ಶನಿವಾರ ಸಂಜೆ ಚಾಮರಾಜನಗರಕ್ಕೆ ತೆರಳಿದ್ದ. ಆದರೆ ದುರಾದೃಷ್ಟವಶಾತ್ ಭಾನುವಾರ ಸಂಜೆ ಆರು ಗಂಟೆ ಸುಮಾರಿಗೆ ನಾರಾಯಣ ಮಾಸ್ಟ್ರು ವಯೋಸಹಜವಾಗಿ ಸಾವನ್ನಪ್ಪುತ್ತಾರೆ. ತಾತನ ಸಾವಿನ ಸುದ್ಧಿ ಕೇಳಿದ ಮೊಮ್ಮಗ ಚಾಮರಾಜನಗರದಿಂದ ಊರಿಗೆ ಬರಲೆಂದು ತನ್ನ ಬೈಕಿನಲ್ಲಿ ಮೈಸೂರಿಗೆ ಬರುತ್ತಿದ್ದ ವೇಳೆ ಸುಮಾರು ರಾತ್ರಿ ಎಂಟೂವರೆ ಸಮಯಕ್ಕೆ ಚಾಮರಾಜನಗರ ತಾಲೋಕು ಪಣ್ಯದಹುಂಡಿ ಬಳಿ ಬೈಕ್ ಅಪಘಾತಗೊಂಡು ಸಾವನ್ನಪ್ಪಿದ್ದಾನೆ. ಅಪಘಾತ ನಡೆದ ಸಂದರ್ಭ ಹೆದ್ದಾರಿಯಲ್ಲಿ ವಾಹನಗಳು ಕಡಿಮೆ ಇದ್ದಿದ್ದರಿಂದ ಸುಮಾರು ಮುಕ್ಕಾಲು ಗಂಟೆಯ ಬಳಿಕ ಜನರಿಗೆ ಗೊತ್ತಾಗಿದೆ ಎನ್ನಲಾಗಿದೆ.

ನಿಶಾಂತನ ಮೃತದೇಹವನ್ನು ಸೋಮವಾರ ಶೇಡಿಮನೆಗೆ ತರಲಾಯಿತು. ಅಜ್ಜ ಮತ್ತು ಮೊಮ್ಮಗನ ಮೃತದೇಹಗಳನ್ನು ಅಕ್ಕಪಕ್ಕದ ಚಿತೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Related Posts

Scroll to Top