ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಪ್ರೀತಿಸಿದಂತೆ ನಾಟಕ, ಲೈಂಗಿಕವಾಗಿ ಬಳಸಿಕೊಂಡ ಯುವಕ ; ಠಾಣೆ ಮೆಟ್ಟಿಲೇರಿದ ಇಬ್ಬರು ಯುವತಿಯರು

ಹಾಸನ : ಯುವಕನೋರ್ವ ಪ್ರೀತಿಸಿ ಲೈಂಗಿಕವಾಗಿ ಬಳಸಿಕೊಂಡು ಹಲವು ಯುವತಿಯರಿಗೆ ಚಿತ್ರಹಿಂಸೆ ನೀಡಿರುವ ಘಟನೆಯೊಂದು ಮುನ್ನೆಲೆಗೆ ಬಂದಿದೆ.

ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ಶರತ್‌ ಆರೋಪಿ ಯುವಕ.

ಭೂಮಿಕಾ ಮತ್ತು ಹುದಾ ಎಂಬವರು ಪ್ರಿಯಕರನಿಂದ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯರಾಗಿದ್ದು, ಶರತ್ ಮೂರು ವರ್ಷದಿಂದ ಹುದಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಹುದಾಳಿಂದ ಹಣ, ಒಡವೆ ಪಡೆದಿದ್ದಾನೆ.

ಅತ್ತ ಶರತ್ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿ ಕಾಲೇಜಿನಲ್ಲಿ ಭೂಮಿಕಾಗೂ ಪರಿಚಯವಾಗಿದ್ದ. ಫೋನ್ ನಂಬರ್ ಪಡೆದು ನಯವಾಗಿ ಮಾತನಾಡಿ ಭೂಮಿಕಾಳ ಜೊತೆಗೂ ಪ್ರೀತಿ ನಾಟಕವಾಡಿದ್ದ. ಇದನ್ನು ಕಂಡು ಭೂಮಿಕಾ ಹುದಾಳ ಇನ್ಸ್ಟಾಗ್ರಾಂನಲ್ಲಿ ಟ್ಯಾಗ್ ಮಾಡಿದ್ದಳು.

ಭೂಮಿಕಾ ಶಿವಮೊಗ್ಗ ಮೂಲದವಳಾಗಿದ್ದು, ಹುದಾ ಟ್ಯಾಗ್ ನೋಡಿದ ಬಳಿಕ ಶರತ್‌ನನ್ನು ಭೂಮಿಕಾ ಪ್ರಶ್ನೆ ಮಾಡಿದ್ದಾಳೆ. ನಂತರ ಭೂಮಿಕಾಗೆ ವಿಡಿಯೋ ಕಾಲ್ ಮಾಡಿ ಹುದಾಗೆ ಶರತ್ ಮನಬಂದಂತೆ ಥಳಿಸಿದ್ದಾನೆ. ಶರತ್ ದೌರ್ಜನ್ಯವೆಸಗಿದ ದೃಶ್ಯವನ್ನು ಭೂಮಿಕಾ ರೆಕಾರ್ಡ್ ಮಾಡಿದ್ದಾಳೆ. ನಂತರ ಪೊಲೀಸ್ ಠಾಣೆಗೆ ತೆರಳಿ ಭೂಮಿಕಾ ದೂರು ನೀಡಿದ್ದಾಳೆ.

ಇತ್ತ ಭೂಮಿಕಾಳನ್ನು ಶರತ್ ಲೈಂಗಿಕವಾಗಿ ಬಳಸಿಕೊಂಡು ಹಣ, ಒಡವೆ ಪೀಕಿದ್ದಾನೆ. ಹೀಗಾಗಿ ಶರತ್ ವಿರುದ್ಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಕಲೇಶಪುರ ಗ್ರಾಮಾಂತರ ಪೊಲೀಸರು ಶರತ್ನನ್ನು ಬಂಧಿಸಿದ್ದಾರೆ.

Related Posts

Scroll to Top