ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಊಟದ ಮೆನುವಿನಲ್ಲಿ ಮಟನ್ ಕರ್ರಿ ಇಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ವರ!

ಹೈದರಾಬಾದ್ : ಇತ್ತೀಚಿನ ದಿನಗಳಲ್ಲಿ ಕ್ಲುಲ್ಲಕ ವಿಚಾರಕ್ಕಾಗಿ ಮದುವೆಗಳು ರದ್ದಾಗುವ ಪ್ರಕರಣಗಳು ಹೆಚ್ಚುತ್ತಿವೆ. ಅಂಥದ್ದೇ ಘಟನೆಯೊಂದು ನಡೆದು ಹೋಗಿರುವ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.

ವಧುವಿನ ಕಡೆಯವರು ಊಟದ ಮೆನುವಿನಲ್ಲಿ ಮಟನ್ ಬೋನ್ ಮ್ಯಾರೋ ಸೇರಿಸಿಲ್ಲವೆಂದು ವರನ ಕಡೆಯವರು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾರೆ. ನಿಜಾಮಾಬಾದ್‍ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೂ ಮದುವೆ ನಿಶ್ಚಯವಾಗಿತ್ತು. ಅಂತೆಯೇ ಕಳೆದ ನವೆಂಬರ್ ತಿಂಗಳಲ್ಲಿ ವಧುವಿನ ಮನೆಯಲ್ಲಿ ನೆರವೇರಿತ್ತು. ಆದರೆ ಇದೀಗ ಸಣ್ಣ ವಿಚಾರವೊಂದಕ್ಕೆ ಮದುವೆಯೇ ರದ್ದಾಗಿದೆ.

ನಿಶ್ಚಿತಾರ್ಥದ ಬಳಿಕ ವಧುವಿನ ಮನೆಯವರು ತಮ್ಮ ಕುಟುಂಬ ಸದಸ್ಯರು ಮತ್ತು ವರನ ಸಂಬಂಧಿಕರು ಸೇರಿದಂತೆ ಅತಿಥಿಗಳಿಗಾಗಿ ಮಾಂಸಾಹಾರಿ ಮೆನುವನ್ನು ಏರ್ಪಡಿಸಿದ್ದರು. ಆದರೆ ಈ ಮೆನುವಿನಲ್ಲಿ ಮಟನ್ ಐಟಮ್ ಇರಲಿಲ್ಲ. ಇದನ್ನು ಗಮನಿಸಿದ ವರನ ಕಡೆಯವರು ಮಟನ್ ಬೇಕು ಎಂದು ಹಠಕ್ಕೆ ಬಿದ್ದರು. ಈ ಸಂಬಂಧ ಎರಡೂ ಮನೆಯವರಿಗೂ ಜಗಳ ಆರಂಭವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದ ಪರಿಣಾಮ ಪೊಲೀಸರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದಿರುವ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಮುಂದಾದರು. ವರನ ಕುಟುಂಬದವರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ ವಧುವಿನ ಕಡೆಯವರು ನಮಗೆ ಅವಮಾನ ಮಾಡಿದರೆಂದು ಹೇಳಿ ವರನ ಕಡೆಯವರು ಆಕ್ರೋಶಗೊಂಡರು.

ವಧುವಿನ ಕಡೆಯವರು ಉದ್ದೇಶಪೂರ್ವಕವಾಗಿಯೇ ಮಟನ್ ಕರ್ರಿ ಮಾಡಿಲ್ಲ ಎಂದು ವರನ ಕಡೆಯವರು ಆರೋಪಿಸಿದರು. ಈ ಜಗಳ ತಾರಕಕ್ಕೇರಿ ಕೊನೆಗೆ ಮದುವೆಯನ್ನೇ ರದ್ದು ಮಾಡುವುದಾಗಿ ನಿರ್ಧಾರ ಮಾಡಲಾಯಿತು.

Related Posts

Scroll to Top