Sunday, September 8, 2024
Homeಸುದ್ದಿಉಡುಪಿ: 'ಸಿಎಂ ಸಿದ್ದರಾಮಯ್ಯ ದೇಶ ವಿರೋಧಿ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ' - ಶಾಸಕ ಯಶ್‌...

ಉಡುಪಿ: ‘ಸಿಎಂ ಸಿದ್ದರಾಮಯ್ಯ ದೇಶ ವಿರೋಧಿ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ’ – ಶಾಸಕ ಯಶ್‌ ಪಾಲ್ ಸುವರ್ಣ

ಉಡುಪಿ, ಫೆ. 03: ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ಹಾಕಿರುವ ವಿಚಾರವಾಗಿ ಉಡುಪಿ ಶಾಸಕ ಯಶ್‌ ಪಾಲ್ ಸುವರ್ಣ ಕಿಡಿಕಾರಿದ್ದಾರೆ.

ಈ ಕುರಿತಾಗಿ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್‌ ಪಾಲ್ ಸುವರ್ಣ ಅವರು, ಕೆಲವು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಸಂಸದ ಪ್ರತ್ಯೇಕ ರಾಷ್ಟ್ರದ ಕೂಗು ಎಬ್ಬಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ದೇಶ ವಿರೋಧಿ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರ ದೇಶ ವಿರೋಧಿ, ಹಿಂದೂ ವಿರೋಧಿ ನಿಲುವನ್ನು ತುಳಿಯುತ್ತಿದೆ. ಪ್ರಮುಖವಾಗಿ ಸಿಎಂ ಅವರು ಅಲ್ಪಸಂಖ್ಯಾತರ ಓಲೈಕೆಗಾಗಿ ಹೀಗೆ ವರ್ತಿಸುತ್ತಾರೆ.

ಇನ್ನು ಕುಂಕುಮ ಕೊಡಲು ಬಂದಾಗ ಅದನ್ನು ತಡೆದಿದ್ದಕ್ಕಾಗಿ ಸಿದ್ದರಾಮಯ್ಯ-ಡಿಕೆ ಸುರೇಶ್ ನಿವೃತ್ತಿ ಜೀವನವನ್ನು ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕಳೆಯುವ ಯೋಚನೆ ಮಾಡಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News