ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಸ್ಥಳ ಮಹಜರಿಗಾಗಿ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು

ಕಾರ್ಕಳ : ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ.

2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ.

ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ (ಉಣ್ಣಿಮಾಯಾ) (28) ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದು. ನಂತರ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳು. ಈಕೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೆರೆಯಾಗಿದ್ದಳು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ.

Related Posts

Scroll to Top