Sunday, September 8, 2024
Homeಸುದ್ದಿಕರಾವಳಿಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ : ಶಾಲೆಗೆ ಹೋಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳ ಶವ ಪತ್ತೆ

ಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ : ಶಾಲೆಗೆ ಹೋಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳ ಶವ ಪತ್ತೆ

ಮಂಗಳೂರು : ನಿನ್ನೆ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ (15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್( 15) ಸಾವನ್ನಪ್ಪಿದ್ದಾರೆ.

ಮಂಗಳೂರಿನ ಸುರತ್ಕಲ್ನ ವಿದ್ಯಾದಾಯಿನಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದರು.

ನಿನ್ನೆ ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ತೆರಳದೇ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಮಕ್ಕಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಮತ್ತು ಪೊಲೀಸರು ಹುಡುಕಾಟ ನಡೆಸಿದ್ದರು.

ಶಾಲೆಯಿಂದ ಹಳೆಯಂಗಡಿ ನದಿ ಬಳಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್, ಸಮವಸ್ತ್ರ ಪತ್ತೆಯಾಗಿತ್ತು. ಅಲ್ಲಿ ತೀವ್ರ ಹುಡುಕಾಟ ನಡೆಸಿದಾಗ ನಾಲ್ವರು ಮಕ್ಕಳ ಶವ ಪತ್ತೆಯಾಗಿವೆ. ನದಿಯಲ್ಲಿ ಈಜಾಡಲು ಹೋಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News