ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್.. ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ನಲ್ಲಿ ಚಾಲಕನ‌ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ನ ಬ್ರೇಕ್ ಇದ್ದಕ್ಕಿಂದ್ದಂತೆ ಫೇಲ್ ಆಗಿದೆ.

ಗೊತ್ತಾಗ್ತಿದ್ದಂತೆ ಗಾಬರಿಗೆ ಒಳಗಾಗದ ಡ್ರೈವರ್, ಪ್ರಯಾಣಿಕರಿಗೆ ಧೈರ್ಯದಿಂದ ಮತ್ತು ಜಾಗೃತರಾಗಿ ಇರುವಂತೆ ಮಾಹಿತಿ ನೀಡಿದ್ದಾರೆ. ನಂತರ ಯಾವುದಾದರೂ ಮೂರಿ ಅಥವಾ ಧರೆಗೆ ಗುದ್ದಿ ನಿಲ್ಲಿಸುವುದಾಗಿ ತಿಳಿಸಿದ್ದಾರೆ.

ಅಂತೆಯೇ ಚಾಲಕ ಸಂತೋಷ್ ಅವರು ಬಸ್ ಅನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ. ಚಾಲಕ ಸಂತೋಷ್ ಸಮಯ ಪ್ರಜ್ಞೆಗೆ ಪ್ರಯಾಣಿಕರು ಹಾಗೂ ಜನರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

You cannot copy content from Baravanige News

Scroll to Top