ಉಡುಪಿ : ಏ.19, 20 , 21 ರಂದು ಅಂಚೆ ಮತಪತ್ರದ ಮೂಲಕ ಮತದಾನ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಗತ್ಯ ಸೇವಾ ಪ್ರವರ್ಗದಲ್ಲಿ ಬರುವ ಗೈರು ಹಾಜರಿ ಮತದಾರರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅನುಕೂಲವಾಗುವಂತೆ ಮಾಡಲಾಗಿದೆ.


ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕೀರ್ಣದ ಎ ಬ್ಲಾಕ್, ಚುನಾವಣಾಧಿಕಾರಿಯವರ ಕಚೇರಿಯ ಕಂಟ್ರೋಲ್ ರೂಂ ನಲ್ಲಿ ಏಪ್ರಿಲ್ 19, 20 ಹಾಗೂ 21 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗಿರುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top