ಮಂಗಳೂರು : ನಗರ ಹೊರವಲಯದ ಉಳಾಯಿಬೆಟ್ಟು ಎಂಬಲ್ಲಿನ ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ಗೆ ನುಗ್ಗಿದ 9 ಮಂದಿಯ ತಂಡವೊಂದು ದರೋಡೆಗೈದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಉಳಾಯಿಬೆಟ್ಟು ಮನೆಯಲ್ಲಿ ಘಟನೆ ನಡೆದಿದೆ.
ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ. ಅಲ್ಲದೆ ಪದ್ಮನಾಭ ಕೋಟ್ಯಾನ್ ಮತ್ತವರ ಕುಟುಂಬದ ಸದಸ್ಯರನ್ನು ಬೆಡ್ಶೀಟ್ನಿಂದ ಕಟ್ಟಿ ಹಾಕಿದ್ದರು. ಈ ಸಂದರ್ಭ ಪದ್ಮನಾಭ ಕೋಟ್ಯಾನ್ ಅವರ ಕೈಗೆ ಗಾಯವಾಗಿದೆ. ದರೋಡೆಕೋರರು ಮನೆಯನ್ನು ಜಾಲಾಡಿ ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ. ಮನೆಯ ಅಂಗಳದಲ್ಲಿದ್ದ ವಾಹನವನ್ನು ಸ್ವಲ್ಪ ದೂರ ಕೊಂಡೊಯ್ದು ಬಳಿಕ ಅಲ್ಲೇ ಅದನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರ ಮಾಹಿತಿ ಕಲೆ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »