ನಟ ಚೇತನ್​ಗೆ ಮಸಿ ಬಳಿಯಲು ಪಯತ್ನ: 12 ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಬೆಂಗಳೂರು ಅ. 21: ‘ಭೂತಕೋಲ ಹಿಂದೂ ಸಂಪ್ರದಾಯವಲ್ಲ’ ಎಂದು ಚೇತನ್ ಹೇಳಿಕೆ ವಿಚಾರ ಹಿನ್ನೆಲ್ಲೆ ಚೇತನ್​ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವಂತಹ ಘಟನೆ ನಡೆದಿದೆ. ಇಂದು ಶೇಷಾದ್ರಿಪುರಂನಲ್ಲಿರುವ ನಟ ಚೇತನ್ ಮನೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಈ ವೇಳೆ ಮುಖಕ್ಕೆ ಮಸಿ ಬಳಿಯಲು ಮುಂದಾದಾಗ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಮಡಿಕೇರಿಯಲ್ಲಿ ನಟ ಚೇತನ್ ವಿರುದ್ಧ ಹಿಂದೂ ಯುವಸೇನೆ ಡಿ.ವೈಎಸ್​ಪಿಗೆ ದೂರು ನೀಡಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಬಗ್ಗೆ ನಟ ಚೇತನ್​ ಟೀಕೆ ಮಾಡಿದ್ದು, ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂಬ ಹೇಳಿಕೆ ನೀಡಿದ್ದರು. ಚೇತನ್ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದು, ನಟ ಚೇತನ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಹಿಂದೂ ಯುವಸೇನೆ ಆಗ್ರಹಿಸಿದೆ.

You cannot copy content from Baravanige News

Scroll to Top