Sunday, September 8, 2024
Homeಸುದ್ದಿಕರಾವಳಿಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಲಾರಿ.. ಡ್ರೈವರ್ ಸೇಫ್ ಆದ್ರಾ? 

ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಲಾರಿ.. ಡ್ರೈವರ್ ಸೇಫ್ ಆದ್ರಾ? 

ಶಿವಮೊಗ್ಗ : ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ತೀರ್ಥಹಳ್ಳಿ ಮಾರ್ಗದ ಸಕ್ರೇಬೈಲ್ನಲ್ಲಿ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಿವಮೊಗ್ಗ ಹೊರವಲಯದ ತೀರ್ಥಹಳ್ಳಿ ಮಾರ್ಗದ ಸಕ್ರೇಬೈಲ್ ಬಳಿ ಕಲ್ಲಿದ್ದಲು ಹೊತ್ತುಕೊಂಡು ಲಾರಿ ಸಾಗುತ್ತಿತ್ತು. ಮಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯನ್ನು ಬಿಟ್ಟು ಎಡ ಭಾಗಕ್ಕೆ ಹೋಗಿ ಕುಸಿದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯದಂತ ಘಟನೆ ನಡೆದಿಲ್ಲ. ಲಾರಿ ಚಲಾಯಿಸುತ್ತಿದ್ದ ಡ್ರೈವರ್ ಹಾಗೂ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News