ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ನೇಣಿಗೆ ಶರಣು!

ಬಂಟ್ವಾಳ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಮಗ ಲೋಕೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ.

ಈತ ಕೂಲಿ ಕೆಲಸ ಮಾಡುತ್ತಿದ್ದು ಮದ್ಯ ಸೇವನೆ ಅಭ್ಯಾಸ ಹೊಂದಿದ್ದ. ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

You cannot copy content from Baravanige News

Scroll to Top