ಬೈಂದೂರು: ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕ ಸಾವು

ಬೈಂದೂರು, ಮಾ. 21: ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಮಾ.18ರಂದು ಸಂಜೆ ವೇಳೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ.

ಎರ್ನಾಕುಲಂಗೆ ಹೋಗುವ ಮರುಸಾಗರ ರೈಲಿನಲ್ಲಿ ಅಜ್ಮೀರ್ ಜಂಕ್ಷನ್‌ನಿಂದ ಪ್ರಯಾಣಿಕರೊಬ್ಬರು ಪ್ರಯಾಣ ಆರಂಭಿಸಿದ್ದಾರೆ. ಆದರೆ, ಅವರು ರೈಲಿನಿಂದ ಆಕಸ್ಮಿಕವಾಗಿ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top