Sunday, September 8, 2024
Homeಸುದ್ದಿಕಾಪು: ಜೂಜಾಟದ ಅಡ್ಡೆಗೆ ದಾಳಿ; ಐವರು ಪೊಲೀಸ್ ವಶಕ್ಕೆ..!

ಕಾಪು: ಜೂಜಾಟದ ಅಡ್ಡೆಗೆ ದಾಳಿ; ಐವರು ಪೊಲೀಸ್ ವಶಕ್ಕೆ..!

ಕಾಪು ಮಾ.22: ಪಡು ಗ್ರಾಮದ ಕಾಪು ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗೆ ದಾಳಿ ಮಾಡಿದ ಪೊಲೀಸರು 5 ಮಂದಿಯನ್ನು ವಶಕ್ಕೆ ಪಡೆದು ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಠಾಣಾ ಪೊಲೀಸರು ಇಂದು ಪಡು ಗ್ರಾಮದ ಕಾಪು ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಜೂಜಾಟ ನಿರತರಾಗಿದ್ದ ತೌಸಿಫ್, ದೀಪಕ್ ಶ್ರೀನಿವಾಸ, ಆದರ್ಶ್, ಮಂಜುನಾಥ ಎಂಬ ಐವರನ್ನು ವಶಕ್ಕೆ ಪಡೆದು, ಆರೋಪಿಗಳ ಬಳಿ ಇದ್ದ 4,060 ರೂ. ನಗದು ಹಾಗೂ ಜೂಜಾಟಕ್ಕೆ ಬಳಸಿದ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News