ಮಂಗಳೂರು (ಮಾರ್ಚ್ 30): 14ನೇ ಮಹಡಿಯಿಂದ ಕೆಳಗೆ ಬಿದ್ದು ಯುವಕನೋರ್ವ ಸಾವನಪ್ಪಿರುವ ಘಟನೆ ಮಂಗಳೂರಿನ ಕೆಪಿಟಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಮೃತ ಯುವಕನನ್ನು ಮಹಮ್ಮದ್ ಶಮಾಲ್ (21) ಎಂದು ಗುರುತಿಸಲಾಗಿದೆ.
ರಂಜಾನ್ ಹಿನ್ನೆಲೆಯಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ, ಮನೆಯ ಬಾಲ್ಕನಿಗೆ ಹೋಗಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಮೃತಪಟ್ಟಿರುವ ಯುವಕ ನಗರದ ಮೊಬೈಲ್ ಕೇರ್ ಮಳಿಗೆಯ ಜಿ.ಅಬ್ದುಲ್ ಸಲೀಂ ಎನ್ನುವವರ ಪುತ್ರ ಎಂದು ತಿಳಿದು ಬಂದಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
14ನೇ ಮಹಡಿಯಿಂದ ಬಿದ್ದು ಯುವಕ ಸಾವು..!!
