ಪುತ್ರನಿಗೆ ಅನಾರೋಗ್ಯ: ನೊಂದ ತಂದೆ ಆತ್ಮಹತ್ಯೆಗೆ ಶರಣು

ಉಡುಪಿ: ಪುತ್ರನ ಅನಾರೋಗ್ಯದಿಂದ ನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸದಾನಂದ ಅಮೀನ್‌(54) ಆತ್ಮಹತ್ಯೆ ಮಾಡಿಕೊಂಡವರು.

ಸಣ್ಣ ವಯಸ್ಸಿನಲ್ಲಿಯೇ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದು, ಕೃತಕ ಕಾಲುಗಳನ್ನು ಜೋಡಿಸಿಕೊಂಡಿದ್ದರು. ಜೊತೆಗೆ ಮಗನಿಗೆ ಅನಾರೋಗ್ಯ ಇದ್ದುದರಿಂದ ಜೀವನದಲ್ಲಿ ನೊಂದು ಎ. 20ರಂದು ಅಂಬಲಪಾಡಿಯ ವಾಸ್ತವ್ಯದ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top