ಬೈಂದೂರು: ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಬೈಂದೂರು, ಏ 23: ಮೀನುಗಾರಿಕೆಗೆ ತೆರಳಿ ದೋಣಿಯಲ್ಲಿ ಬಲೆಯನ್ನು ಎಳೆಯುತ್ತಿರುವವಾಗ ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರರೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದ ಮಡಿಕಲ್ ಜಟ್ಟಿಯಲ್ಲಿ ನಡೆದಿದೆ.

ಮೃತರನ್ನು ನಾಗರಾಜ (43) ಎಂದು ಗುರುತಿಸಲಾಗಿದೆ.

ನಾಗರಾಜ ಅವರು ಬೇರೆ ಮೀನುಗಾರರೊಂದಿಗೆ ದೋಣಿಯಲ್ಲಿ ಮೀನುಗಾರಿಕೆಗೆಂದು ಮಡಿಕಲ್ ಜಟ್ಟಿಯಿಂದ ತೆರಳಿದ್ದು, 12 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಈ ಘಟನೆ ನಡೆದಿದೆ.

ಇನ್ನು ದೋಣಿಯಲ್ಲಿದ್ದವರು ನೀರಿಗೆ ಬಿದ್ದ ತಕ್ಷಣ ನಾಗರಾಜ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಉಪಚರಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ಸೇರಿಸಿ ಬಳಿಕ ಅಲ್ಲಿಂದ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Scroll to Top