ಉಡುಪಿ: ಕೇಂದ್ರದಿಂದ ನಾಡದೋಣಿ ಮೀನುಗಾರಿಕೆಗೆ ಸೀಮೆಎಣ್ಣೆ ಬಿಡುಗಡೆ; ಯಶ್ ಪಾಲ್ ಅಭಿನಂದನೆ

ಉಡುಪಿ, ಏ 26: ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಮೀನುಗಾರಿಕೆ ಇಲಾಖೆ ಕಳೆದ ಸಾಲಿನಲ್ಲಿ ನಾಡದೋಣಿ ಮೀನುಗಾರಿಕೆಗೆ ಸೀಮೆಎಣ್ಣೆಯನ್ನು 150 ಲೀಟರ್ ನಿಂದ 300 ಲೀಟರ್ ಗೆ ಹೆಚ್ಚಿಸಲು ಸಮ್ಮತಿಸಿದ್ದು, ಇದೀಗ ಕೇಂದ್ರ ಸರಕಾರ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸುವ ಮೂಲಕ ನಾಡದೋಣಿ ಮೀನುಗಾರಿಕೆಗೆ ಸಹಕಾರ ನೀಡಿದೆ.

ಕೇಂದ್ರ ಸರಕಾರದ ಮೂಲಕ ಸೀಮೆಎಣ್ಣೆ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You cannot copy content from Baravanige News

Scroll to Top