ಡಿ.ಕೆ. ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು; ತುರ್ತು ಭೂ ಸ್ಪರ್ಶ

ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಪ್ರಾಣಾಪಾಯದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ.

ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್‌ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್‌ ಏರಿದ್ದರು. ಜಕ್ಕೂರಿನಿಂದ ಹೆಲಿಕಾಪ್ಟರ್‌ ಟೇಕಾಫ್‌ ಆಗಿ ಹೊಸಕೋಟೆ ಬಳಿ ಹೋಗುತ್ತಿದ್ದಾಗ ಹದ್ದೊಂದು ಡಿಕ್ಕಿ ಹೊಡೆದಿದೆ.

ಹದ್ದು ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ ಮುಂದಿನ ಗಾಜು ಪುಡಿ ಪುಡಿಯಾಗಿದೆ. ಕೂಡಲೇ ಎಚ್ಚೆತ್ತ ಪೈಲಟ್‌ ಎಚ್‌ಎಎಲ್‌ನಲ್ಲಿ ಹೆಲಿಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ 4 ಮಂದಿ ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್‌ನಿಂದ ಇಳಿದ ಡಿಕೆ ಶಿವಕುಮಾರ್‌ ಕಾರು ಮೂಲಕ ಮುಳಬಾಗಿಲು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.

You cannot copy content from Baravanige News

Scroll to Top