Tuesday, September 17, 2024
Homeಸುದ್ದಿಕೋವಿಡ್ ನಿರ್ವಹಣೆ ವೇಳೆ ಅವ್ಯವಹಾರ ಅರೋಪ; ಬಿ.ಎಸ್.ವೈ ಸೇರಿ 28 ಜನರ ವಿರುದ್ಧ ಲೋಕಯುಕ್ತಕ್ಕೆ ದೂರು

ಕೋವಿಡ್ ನಿರ್ವಹಣೆ ವೇಳೆ ಅವ್ಯವಹಾರ ಅರೋಪ; ಬಿ.ಎಸ್.ವೈ ಸೇರಿ 28 ಜನರ ವಿರುದ್ಧ ಲೋಕಯುಕ್ತಕ್ಕೆ ದೂರು

ಬೆಂಗಳೂರು, ಮೇ 04: ಬರೋಬ್ಬರಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ ಸಚಿವರು ಮತ್ತು ಐಎಎಸ್​ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ.

ದಾಖಲೆ ಸಮೇತ ಆರ್​ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎನ್ನುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೊವಿಡ್​ ನಿರ್ವಹಣೆ ವೇಳೆ ಬಿಬಿಎಂಪಿಯಿಂದ ಕೋಟ್ಯಂತರ ಅವ್ಯವಹಾರ, ಆಂಬ್ಯುಲೆನ್ಸ್ ಖರೀದಿ ನೆಪದಲ್ಲಿ ಹೆಚ್ಚಿನ ವಾಹನಗಳ ಸಂಖ್ಯೆ ತೋರಿಸಿದ್ದಾರೆ. ಆ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪ ಕೊವಿಡ್​ ವಲಯವಾರು ಉಸ್ತುವಾರಿಯಾಗಿದ್ದರು. ಸಚಿವರಾದ ವಿ.ಸೋಮಣ್ಣ ಅಶ್ವತ್ಥ್ ನಾರಾಯಣ, ಸುರೇಶ್ ಕುಮಾರ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಜೋನಲ್ ಮ್ಯಾನೇಜ್​ಮೆಂಟ್ ನಿರ್ವಹಿಸಿದ್ದರು ಎಂದಿದ್ದಾರೆ.

IAS ಅಧಿಕಾರಿಗಳಾದ ಗೌರವ್ ಗುಪ್ತಾ, ಪಿ.ಸಿ.ಜಾಫರ್​, ಮನೋಜ್ ಕುಮಾರ್ ಮೀನಾ, ರವಿಕುಮಾರ್, ವಿ.ಅನ್ಬುಕುಮಾರ್, ಉಜ್ವಲ್ ಕುಮಾರ್, ಪಂಕಜ್ ಕುಮಾರ್ ಕೋಆರ್ಡಿನೇಟ್​ ಮಾಡುತ್ತಿದ್ದರು. 821 ಕೋಟಿಗೂ ಹೆಚ್ಚು ಅವ್ಯವಹಾರದಲ್ಲಿ 28 ಜನರು ಭಾಗಿಯಾಗಿದ್ದಾರೆ. ಕೊವಿಡ್ ವೇಳೆ ಬೆಂಗಳೂರನ್ನು 8 ವಲಯಗಳಾಗಿ ವಿಂಗಡಿಸಿದ್ದರು. ಸಾವಿರಾರು ಆ್ಯಂಬುಲೆನ್ಸ್​ಗಳನ್ನು ಖರೀದಿಸುವುದಾಗಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ.

ಆ್ಯಂಬುಲೆನ್ಸ್ ಹೊರತಾದ ವಾಹನಗಳ ನೋಂದಣಿ ಸಂಖ್ಯೆಗಳಿವೆ. ಬಿಎಸ್​ವೈ ಪುತ್ರ ಬಿ.ವೈ.ವಿಜಯೇಂದ್ರ ಆಪ್ತ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಹಗರಣದಲ್ಲಿ ಬಹುಪಾಲು ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ‌. ಕೊವಿಡ್ ವೇಳೆ ಜನರ ಹೆಣ ಮಾರಿ ಹಣ ಮಾಡಿದ್ದಾರೆ. ಟ್ರಾವೆಲ್ಸ್​ನಲ್ಲಿ ಖರೀದಿ ಮಾಡಿರುವುದಾಗಿ ದಾಖಲೆ ಸೃಷ್ಟಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು FIR ದಾಖಲಿಸಿ ತನಿಖೆ ಮಾಡಬೇಕಿದೆ. ಒಂದು ವೇಳೆ ದಾಖಲಿಸದಿದ್ದರೆ ಮುಂದೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಲಾಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News