ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗೇರು ಬೀಜ ತುಂಬಿದ್ದ ಲಾರಿ

ಉಡುಪಿ : ಗೇರುಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬಲಾಯಿಪಾದೆ ಜಂಕ್ಷನ್ ನಲ್ಲಿ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಲಾರಿ ಗೇರು ಬೀಜ ತುಂಬಿಕೊಂಡು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಬಲಾಯಿಪದೆ ಜಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ನಡುವೆಯೇ ಮಗುಚಿ ಬಿದ್ದಿದೆ. ಗೇರುಬೀಜ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

You cannot copy content from Baravanige News

Scroll to Top