ಉಡುಪಿ: ಜು.23ರಂದು ‘ಸಸ್ಯೋತ್ಸವ- 2023’, ಉಚಿತ ಗಿಡ ವಿತರಣೆ

ಉಡುಪಿ: ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್, ಸರಳೇಬೆಟ್ಟು, ಮಣಿಪಾಲ ಮತ್ತು ಪರಿವಾರ್ ಚಾರಿಟೇಬಲ್ ಟ್ರಸ್ಟ್, ಉಡುಪಿ ಹಾಗೂ ಸ್ನೇಹ ಸಂಗಮ ಸರಳೇಬೆಟ್ಟು, ಮಣಿಪಾಲ ಇವರ ಸಹಭಾಗಿತ್ವದಲ್ಲಿ ಉತ್ತಮ ತಳಿಯ ಕಸಿ ಸಸ್ಯಗಳು, ಹೂವು – ಹಣ್ಣು ಹಂಪಲು, ಅರಣ್ಯ ಸಂಪತ್ತಿನ ಎಲ್ಲಾ ಜಾತಿಯ ಗಿಡಗಳ ಉಚಿತ ವಿತರಣಾ ಮೇಳ ಸಸೋತ್ಸವ 2023 ಕಾರ್ಯಕ್ರಮವನ್ನು ದಿನಾಂಕ 23-07-2023 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ ರತ್ನ ಸಂಜೀವ ಕಲಾಮಂಡಲದ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿ ಮಾಹಿತಿ ನೀಡಿದ ಮಾಜಿ ಶಾಸಕ ಕೆ. ರಘಪತಿ ಭಟ್ ಅವರು, ಪದ್ಮಶ್ರೀ ಸಾಲು ಮರದ ತಿಮ್ಮಕ್ಕನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕರಾದ ಯಶ್ ಪಾಲ್ ಸುವರ್ಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಈ ಸಸ್ಯೋತ್ಸವದಲ್ಲಿ ತೋಟಗಾರಿಕಾ ಇಲಾಖೆಯ ಎಲ್ಲಾ ಪ್ರಕಾರದ ಹೂವಿನ ಗಿಡಗಳು (ದಾಸವಾಳ, ಗುಲಾಬಿ, ನಂದಿ ಬಟ್ಟಲು, ಲಕ್ಷ್ಮೀತರು ಇತ್ಯಾದಿ), ಕಸಿ ಮಾವಿನ ಗಿಡಗಳು (ಆಲ್ಫಾನೋ, ಮಲ್ಲಿಕಾ, ಬಂಗನಪಲ್ಲಿ, ಮಲಗೋವಾ ಇತ್ಯಾದಿ), ಚಿಕ್ಕು, ಪೇರಳೆ, ಲಕ್ಷ್ಮಣ ಫಲ, ರಂಬುಟಾನ್, ಲಿಂಬೆ, ಕರಿಬೇವು ಸೊಪ್ಪು, ಅಡಿಕೆ, ತೆಂಗು, ಜಾಂಬು, ಕಾಳು ಮೆಣಸು, ಮಜ್ಜಿಗೆ ಹುಲ್ಲು, ಹಾಗೆಯೇ ಅರಣ್ಯ ಸಂಪತ್ತುಗಳಾದ ಸಾಗುವಾನಿ, ಶ್ರೀಗಂಧ, ರಕ್ತ ಚಂದನ, ಬಿಲ್ವತ್ರೆ ಮುಂತಾದ ಗಿಡಗಳು ಉಚಿತವಾಗಿ ವಿತರಿಸಲಾಗುವುದು.

ಕಾರ್ಯಕ್ರಮದಲ್ಲಿ ಕೂಡ 20 ಸಾವಿರ ಗಿಡಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಉಡುಪಿ ಇಂದ್ರಾಳಿಯ ಉಪವನ ನರ್ಸರಿ ಸಂಸ್ಥೆಯು ಈ ಕಾರ್ಯಕ್ರಮದ ಸಹಭಾಗಿತ್ವ ವಹಿಸಿ ಎಲ್ಲಾ ಸಸ್ಯಗಳ ಪೂರೈಕೆಯನ್ನು ಮಾಡುತ್ತಿದೆ.

ಪತ್ರಿಕಾಗೋಷ್ಠಿಯಲ್ಲಿ ಶಿವಪೇರಣಾ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಮಹೇಶ್ ಠಾಕೂರ್, ಸ್ನೇಹಸಂಗಮ ಸರಳೇಬೆಟ್ಟು ಅಧ್ಯಕ್ಷರಾದ ಗುರುರಾಜ್ ಭಂಡಾರಿ ಸರಳೇಬೆಟ್ಟು, ಪ್ರಧಾನ ಕಾರ್ಯದರ್ಶಿ ಸಂದೇಶ್ ಪ್ರಭು ಉಪಸ್ಥಿತರಿದ್ದರು.

You cannot copy content from Baravanige News

Scroll to Top