Sunday, September 8, 2024
Homeಸುದ್ದಿಕರಾವಳಿಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ಬಂಗಾಳ ಮೂಲದ ಎಂಟು ತಿಂಗಳ ಗರ್ಭಿಣಿಯ ರಕ್ಷಣೆ

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ಬಂಗಾಳ ಮೂಲದ ಎಂಟು ತಿಂಗಳ ಗರ್ಭಿಣಿಯ ರಕ್ಷಣೆ

ಉಡುಪಿ : ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಪಶ್ಚಿಮ‌ ಬಂಗಾಳ ಮೂಲದ 8 ತಿಂಗಳ ಗರ್ಭಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದದ ಸಹಕಾರದೊಂದಿಗೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಿದ ಘಟನೆ ಇಂದು ನಡೆದಿದೆ.

ರಕ್ಷಿಸಲ್ಪಟ್ಟ ಮಹಿಳೆಯನ್ನು ಪಶ್ಚಿಮ ಬಂಗಾಳದ ಮೂಲದ 35ವರ್ಷದ ಸುಲೇಖ ಎಂದು ಗುರುತಿಸಲಾಗಿದೆ.

ಈಕೆ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಅಸಹಾಯಕತೆಯಿಂದ ಅಳಲುತ್ತಿದ್ದು, ವಿಚಾರಿಸಿದಾಗ ಈಕೆ ಬಂಗಾಳ ಮೂಲದವಳೆಂದು ತಿಳಿದುಬಂದಿದೆ.

ಬಳಿಕ ಬಂಗಾಳಿ ಭಾಷೆ ಬಲ್ಲ ಸುಜಯ ಪತ್ರ ಎಂಬವರನ್ನು ಕರೆತಂದು ವಿಚಾರಿಸಿದಾಗ ಈಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಬಂಗಾಳದಿಂದ ಉಡುಪಿಗೆ ಬಂದಿರುವುದಾಗಿ ಗೊತ್ತಾಗಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಸೆಂಟ್ರಲ್ ರೈಲ್ವೆಯ ಶ್ರೀಕಾಂತ್, ವೆಸ್ಟರ್ನ್ ಸೆಂಟ್ರಲ್ ರೈಲ್ವೆಯ ಜೀನಾ ಪಿಂಟೋ, ರೈಲ್ವೆ ಇನ್ ಸ್ಪೆಕ್ಟರ್ ಸುಧೀರ್ ಶೆಟ್ಟಿ, ಮಹಿಳಾ ಸಾಂತ್ವನ ಕೇಂದ್ರದ ಪೂರ್ಣಿಮಾ ಮತ್ತು ಸುಮತಿ ಭಾಗವಹಿಸಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News