ನಶೆಯಲ್ಲಿ ಕಲ್ಲು ಚೂರಿ ಹಿಡಿದು ನಡು ರಸ್ತೆಯಲ್ಲೇ ದಾಂಧಲೆ; ಯುವಕನ ಬಂಧನ..!!

ಉಳ್ಳಾಲ, ಆ.21: ಮಾದಕ ಪದಾರ್ಥ ಸೇವಿಸಿ ನಶೆಯಲ್ಲಿ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್‌ನಲ್ಲಿ ದಾಂಧಲೆ ನಡೆಸಿದ್ದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ.

ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್‌ನಲ್ಲಿ ನಶೆಯಲ್ಲಿದ್ದ ಸಿದ್ಧೀಕ್, ರಸ್ತೆ ಮಧ್ಯದ ಡಿವೈಡರ್‌ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ದಾಂಧಲೆ ನಡೆಸುತ್ತಿದ್ದ. ಈ ವೇಳೆ ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕ್‌ನನ್ನು ಲಾಕ್ ಮಾಡಿ ಜೈಲಿಗಟ್ಟಿದ್ದಾರೆ.

ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಅವರ ಚಾಣಾಕ್ಷತನದಿಂದ ಸಿದ್ಧೀಕ್‌ನನ್ನು ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲ್‌ಲ್ಲಿ ರೆಕಾರ್ಡ್ ಮಾಡಿದ್ದು, ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Scroll to Top