ಹುಲಿ ಉಗುರು ಕೇಸ್: ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ನಿವಾಸದ ಮೇಲೆ ಅರಣ್ಯ ಅಧಿಕಾರಿಗಳ ದಾಳಿ

ಬೆಂಗಳೂರು,ಅ. 25: ಹುಲಿ ಉಗುರಿನ ಪೆಂಡೆಂಟ್ ಹಾಕಿದ್ದರು ಎನ್ನುವ ಕಾರಣಕ್ಕಾಗಿ ವರ್ತೂರ್ ಸಂತೋಷ್ ಮೊನ್ನೆಯಷ್ಟೇ ಬಂಧಿಸಲಾಗಿತ್ತು. ಇದರ ಬೆನ್ನಲ್ಲೇ ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಅವರಿಗೂ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ದರ್ಶನ್‌ ನಿವಾಸ ಆರ್‌ಆರ್ ನಗರಕ್ಕೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ.

ದರ್ಶನ್ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿತ್ತು. ಈ ಹಿನ್ನಲೆ ನಟನ ಮನೆಗೆ ಮೂವರು ಅಧಿಕಾರಿಗಳಿಂದ ಹುಲಿ ಉಗುರಿಗಾಗಿ ಭೇಟಿ ನೀಡಿದ್ದಾರೆ. ಸದ್ಯ ದರ್ಶನ್ ಮೈಸೂರಿನಲ್ಲಿ ಇದ್ದಾರೆ ಎಂದು ತಿಳಿದು ಬಂದಿದ್ದು, ಅರಣ್ಯಾಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ರಾಜ್ಯಸಭಾ ಸದಸ್ಯ ಜಗ್ಗೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ. ಸದ್ಯ ಜಗ್ಗೇಶ್ ಹುಟ್ಟುರಿನಲ್ಲಿದ್ದಾರೆ. ಈ ಹಿನ್ನೆಲೆ ಅವರ ಪತ್ನಿ ಪರಿಮಳರಿಗೆ ನೋಟೀಸ್ ಕೊಡುವ ಸಾಧ್ಯತೆಯಿದೆ. ರಾಕ್ ಲೈನ್ ವೆಂಕಟೇಶ್ ನಿವಾಸದ ಮೇಲೆ ಅರಣ್ಯ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಇನ್ನೂ ಹುಲಿಯುಗುರಿನ ಪೆಂಡೆಂಟ್ ಮನೆಯಲ್ಲಿದ್ದರೆ ವಶಕ್ಕೆ ಪಡೆಯುತ್ತಾರೆ. ಒಂದು ವೇಳೆ ಮನೆಯಲ್ಲಿ ಪೆಂಡೆಂಟ್ ಇಲ್ಲ ಅಂದ್ರೆ ಆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

Scroll to Top