ಉಡುಪಿ: ಜಿಲ್ಲಾಡಾಳಿತದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ; ಕುತ್ಯಾರು ಯುವಕ‌ ಮಂಡಲಕ್ಕೆ 2023 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ

ಕುತ್ಯಾರು, ನ.01: ಸಾಧನೆಗಳನ್ನು ಗುರುತಿಸಿ ಕರ್ನಾಟಕ ಸರ್ಕಾರ ಕೊಡಮಾಡುವ 2023 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕುತ್ಯಾರು ಯುವಕ‌ ಮಂಡಲಕ್ಕೆ ದೊರೆತಿದೆ.

ಇಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಡಾಳಿತದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನೆರವೇರಿತು.

ಸದ್ರಿ ಸಂಸ್ಥೆಯು 1963ರಲ್ಲಿ ಸ್ಥಾಪನೆಯಾಗಿದ್ದು, 60 ವರ್ಷಗಳಿಂದ ಕುತ್ಯಾರು ಯುವಕ ಮಂಡಲವು ಶೈಕ್ಷಣಿಕ ಕ್ಷೇತ್ರ, ಕ್ರೀಡಾ ಕ್ಷೇತ್ರ, ಕೃಷಿ ಕ್ಷೇತ್ರ, ಕಲಾಕ್ಷೇತ್ರ, ಉದ್ಯೋಗ ಕಾರ್ಯಕ್ರಮ, ರಾಷ್ಟೀಯ ಹಬ್ಬ, ಪರಿಸರ ಸಂರಕ್ಷಣೆ, ರಕ್ತದಾನ ಇತ್ಯಾದಿ ಸಮಾಜ ಸೇವೆಗಳನ್ನು ಮಾಡಿಕೊಂಡು ಬಂದಿದೆ.

You cannot copy content from Baravanige News

Scroll to Top