ಚೈತ್ರಾ ಅಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ CCB ಸಿದ್ಧತೆ.. ಸದ್ಯ ಆರೋಪಿಗಳು ಇರುವುದು ಎಲ್ಲಿ?

ಬೆಂಗಳೂರು : ಚೈತ್ರಾ ಆ್ಯಂಡ್ ಗ್ಯಾಂಗ್ನಿಂದ ಎಂಎಲ್ಎ ಟಿಕೆಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಗೋವಿಂದ ಬಾಬು ಪೂಜಾರಿ ಎನ್ನುವವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂಪಾಯಿಗಳನ್ನು ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳು ವಂಚನೆ ಮಾಡಿದ್ದರು. ಮುಂದಿನ ವಾರ ಈ ಎಲ್ಲರ ವಿರುದ್ಧ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಅಧಿಕಾರಿಗಳು ತಯಾರಿ ಮಾಡುತ್ತಿದ್ದಾರೆ. ಈ ಎಲ್ಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.


ಸಿಸಿಬಿ ಅಧಿಕಾರಿಗಳು ಒಟ್ಟು 68 ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಎಲ್ಲರಿಂದ ಹೇಳಿಕೆ ಪಡೆಯುವ ಮೂಲಕ ಚಾರ್ಜ್ಶೀಟ್ ಸಿದ್ಧತೆ ಮಾಡಿಕೊಂಡಿದ್ದಾರೆ. ಆರೋಪಿಗಳಿಂದ ದೊಡ್ಡ ಮಟ್ಟದ ಅಮೌಂಟ್ ಅಂದರೆ 4 ಕೋಟಿ 11 ಲಕ್ಷ ರೂ.ಗಳನ್ನು ರಿಕವರ್ ಮಾಡಲಾಗಿದೆ. ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಪ್ರಕರಣ ಸಂಬಂಧ ಎಲ್ಲ ಆಡಿಯೋ, 10 ವಿಡಿಯೋ, ಮೊಬೈಲ್ ಡೇಟಾ ಹಾಗೂ ದಾಖಲೆಗಳನ್ನು ಸಿಸಿಬಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

You cannot copy content from Baravanige News

Scroll to Top