ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಮದುವೆ ಊಟದಲ್ಲಿ ರಸಗುಲ್ಲಾ ಕಡಿಮೆ ಹಾಕಿದ್ದಕ್ಕೆ ಹೊಡೆದಾಟ.. ಆರು ಮಂದಿಗೆ ಗಂಭೀರ ಗಾಯ

ಆಗ್ರಾ : ಮದುವೆ ಅನ್ನೋದು ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಅನ್ನೋ ಮಾತಿದೆ. ಮದುವೆ ಮನೆ ಅಂದ್ರೆ ಬಂಧು ಬಾಂಧವರು ಖುಷಿ-ಖುಷಿಯಾಗಿ ಬಂದು ಶುಭಾಶಯ ಕೋರುವುದೇ ಒಂದು ಸಂಭ್ರಮ. ಮದುವೆ ಸಂತೋಷದಿಂದ ಆದ್ರೆ ಸಂಗಾತಿಯೊಂದಿಗೆ ಸಂಸಾರ. ಆದರೆ ಉತ್ತರ ಪ್ರದೇಶದ ಮದುವೆ ಮನೆಯಲ್ಲೊಂದು ಅವಾಂತರ ನಡೆದು ಹೋಗಿದೆ.

ಆಗ್ರಾದ ಮದುವೆಯಲ್ಲಿ ಊಟಕ್ಕೆ ರಸಗುಲ್ಲಾ ಕಡಿಮೆ ಬಿದ್ದಿದ್ದಕ್ಕೆ ಹೊಡೆದಾಟ ನಡೆದಿದೆ.

ರಸಗುಲ್ಲಾದಿಂದ ಶುರುವಾದ ಜಗಳ ಮದುವೆ ಮನೆಯಲ್ಲಿ ಮಾರಾಮಾರಿಯನ್ನೇ ಸೃಷ್ಟಿಸಿದೆ. ರಸಗುಲ್ಲಾಕ್ಕಾಗಿ ಆರಂಭವಾದ ಜಗಳದಲ್ಲಿ ಆರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಗ್ರಾದ ಶಂಸಾಬಾದ್‌ನಲ್ಲಿ ನಡೆಯುತ್ತಿದ್ದ ಮದುವೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಸಗುಲ್ಲಾಕ್ಕಾಗಿ ಕಿತ್ತಾಟ ನಡೆಸಿದವರು ಮದುವೆ ಸಂಭ್ರಮದಿಂದ ಆಸ್ಪತ್ರೆ ಪಾಲಾದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶಂಸಾಬಾದ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ತಿಳಿಸಿದ್ದಾರೆ.

Related Posts

Scroll to Top