ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

‘ಲೀಲಾವತಿ ಅವರನ್ನ ನೋಡಿದ್ರೆ ನನ್ನ ತಾಯಿಯೇ ನೆನಪಾದರೂ’- ಶಿವರಾಜ್‌ ಕುಮಾರ್ ಭಾವುಕ

ಬೆಂಗಳೂರು : ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ನೆಲೆಸಿರುವ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಲೀಲಾವತಿಯವರ ಆರೋಗ್ಯ ವಿಚಾರಿಸಲು ಸ್ಯಾಂಡಲ್ವುಡ್ ನಟ ಹಾಗೂ ನಟಿಯರು, ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ಮೊನ್ನೆಯಷ್ಟೇ ಹಿರಿಯ ನಟಿ ಲೀಲಾವತಿ ಮನೆಗೆ ಸ್ಯಾಂಡಲ್ವುಡ್ ನಟ ದರ್ಶನ್ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಜೊತೆಗೆ ಬಹುಭಾಷಾ ನಟ ಅರ್ಜುನ್ ಸರ್ಜಾ ಕೂಡ ಈ ಹಿಂದೆ ಲೀಲಾವತಿಯವರ ಆರೋಗ್ಯ ವಿಚಾರಿಸಿದ್ದರು. ಇದೀಗ ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ದಂಪತಿ ಭೇಟಿ ಕೊಟ್ಟಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ ಅವರನ್ನು ನೋಡಲು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ.

ಇನ್ನು, ಇದೇ ವೇಳೆ ಮಾತಾಡಿದ ಶಿವರಾಜ್‌ ಕುಮಾರ್ ಅವರು ”ನನ್ನ ವಾಯ್ಸ್ ಕಂಡು ಹಿಡಿದರು. ಆ ವಯಸ್ಸಿನಲ್ಲೂ ತಾಳುವಂತ ಶಕ್ತಿ ಇದೆ ಅವರಿಗೆ. ಯೋಗ ಪುರುಷರು ಅವರು. ಒಳ್ಳೆಯ ಮನಸ್ಸಿದೆ. ಒಳ್ಳೆಯ ಆತ್ಮೀಯತೆ, ಪ್ರೀತಿ, ಆಶೀರ್ವಾದ ಇದೆ. ತುಂಬಾ ಪ್ರೀತಿ ಇದೆ. ಲೀಲಾವತಿ ಅವರನ್ನು ನೋಡಿದ್ರೆ ನನ್ನ ತಾಯಿ ನೋಡಿದಂತೆ ಆಗುತ್ತದೆ. ಇನ್ನೂ ಇರಬೇಕು ಅವರು. ನೋವಾಗುತ್ತದೆ ತಡೆದುಕೊಳ್ಳಬೇಕು ಎಂದು ಇದೇ ವೇಳೆ ವಿನೋದ್ ರಾಜ್ ಅವರ ಕೈ ಹಿಡಿದು ತಬ್ಬಿಕೊಂಡ ಧೈರ್ಯವಾಗಿ ಇರು” ಎಂದು ಹೇಳಿದ್ದಾರೆ.

Related Posts

Scroll to Top