ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ

ಶಿರ್ವ : ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವರ ಪುನಃಪ್ರತಿಷ್ಠೆಯ ದ್ವಾದಶ ವರ್ಷದ ಪ್ರಯುಕ್ತ ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಅವರ ನೇತೃತ್ವದಲ್ಲಿ ಅರ್ಚಕ ವೇ|ಮೂ| ಬೆಳ್ಳೆ ಮಧ್ವರಾಜ ಭಟ್ಟರ ಸಹಯೋಗದೊಂದಿಗೆ ಗುರುವಾರ ಬ್ರಹ್ಮಕುಂಭಾಭಿಷೇಕ ಸಂಪನ್ನಗೊಂಡಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಡಿ.25 ರಂದು ವಿವಿಧ ಕಾರ್ಯಕ್ರಮಗಳು ಪ್ರಾರಂಭ ಗೊಂಡಿದ್ದು, ಗುರುವಾರ ಬೆಳಗ್ಗೆ ದಶವಿಧ ಸ್ನಾನ, 504 ಕಲಶಾಭಿಷೇಕ, 10.50ರ ಕುಂಭ ಲಗ್ನದಲ್ಲಿ ಬ್ರಹ್ಮಕುಂಭಾಭಿಷೇಕ, ನ್ಯಾಸಪೂಜೆ, ಮಹಾಪೂಜೆ, ಅವಸ್ರುತಬಲಿ, ಪಲ್ಲಪೂಜೆ, ಬ್ರಾಹ್ಮಣಾರಾಧನೆ, ಅನ್ನಸಂತರ್ಪಣೆ, ಸಾಯಂಕಾಲ ದೀಪಾರಾಧನೆ ಪೂಜೆ, ರಾತ್ರಿ ರಂಗಪೂಜೆ, ದೇವರ ಉತ್ಸವ ಬಲಿ, ಪರಿವಾರ ದೇವರಿಗೆ ಕಲಶ ಪೂರಣೆ ನಡೆಯಿತು.

ಡಿ. 29 ರಂದು ಬೆಳಗ್ಗೆ ಮಹಾರುದ್ರಯಾಗ, ಪರಿವಾರ ದೈವಗಳ ಕಲಶಾಭಿಷೇಕ, ಸಾಯಂಕಾಲ 4ರಿಂದ ಶ್ರೀಚಕ್ರ ಪೂಜೆ, ಬ್ರಾಹ್ಮಣ ಸುವಾಸಿನಿ, ವಟು ಕನ್ನಿಕಾರಾಧನೆ, ರಾತ್ರಿ ಪೂಜೆ, ಆಚಾರ್ಯ ಪೂಜೆ, ಮಂಗಲ ಮಂತ್ರಾಕ್ಷತೆ, ಮಹಾಪ್ರಸಾದ ವಿತರಣೆ ನಡೆಯಲಿದೆ.

ದೇವಸ್ಥಾನದ ಆಡಳಿತ ಮೊಕ್ತೇಸರ ಬೆಳ್ಳೆ ದೊಡ್ಡಮನೆ ಸುಭಾಶ್ಚಂದ್ರ ಶೆಟ್ಟಿ, ಬೆಳ್ಳೆ ದೊಡ್ಡಮನೆ ಸೀತಾರಾಮ ಶೆಟ್ಟಿ, ಪಠೇಲ್‌ ಮನೆ ದಯಾನಂದ ಶೆಟ್ಟಿ, ಬೆಳ್ಳೆ ಕಕ್ರಮನೆ ಹರೀಶ್‌ ಶೆಟ್ಟಿ, ಬೆಳ್ಳೆ ನಡಿಮನೆ ವಿಶ್ವನಾಥ ಶೆಟ್ಟಿ, ಬೆಳ್ಳೆ ಗರಡಿಮನೆ ಸದಾನಂದ ಪೂಜಾರಿ, ಭಾಸ್ಕರ ಶೆಟ್ಟಿ ಸಡಂಬೈಲು, ಪಡುಬೆಳ್ಳೆ ಸುಧಾಕರ ಪೂಜಾರಿ, ಬೆಳ್ಳೆ ದೊಡ್ಡಮನೆ ಅಶೋಕ್‌ ಶೆಟ್ಟಿ, ರಾಘವೇಂದ್ರ ಶೆಟ್ಟಿ, ಬೆಳ್ಳೆ ಸದಾನಂದ ಶೆಣೈ, ರಾಮಚಂದ್ರ ನಾಯಕ್‌, ವಿಹಿಂಪ, ಬಜರಂಗದಳ ಮಾತೃಶಕ್ತಿ ಘಟಕದ ಸದಸ್ಯರು, ಸ್ತ್ರೀಶಕ್ತಿ ಸಂಘಗಳ ಸದಸ್ಯರು, ವಿವಿಧ ಸಂಘ‌ಟನೆಗಳ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

Related Posts

Scroll to Top