ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಪುತ್ತೂರು : ತಡರಾತ್ರಿ ಓದಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!

ಪುತ್ತೂರು : ಕೋವಿಡ್ ಸಾಂಕ್ರಾಮಿಕದ ಬಳಿಕ ಹೃದಯಾಘಾತಗಳ ಸಂಖ್ಯೆ ಏರುತ್ತಲಿದೆ. ಇಳಿವಯಸ್ಸಿನಲ್ಲಿ ಹೃದಯಾಘಾತಗಳು ಸಹಜವಾಗಿದ್ದರೂ ಹದಿಹರೆಯದವರು ಇದಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿಯಾಗಿದೆ.

ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಹೃದಯಾಘಾತಕ್ಕೆ ತುತ್ತಾಗಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯು ಉಪ್ಪಿನಂಗಡಿ ಸಮೀಪ ನಡೆದಿದೆ.

ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಿವಾಸಿ ಉದ್ಯಮಿ ದಾವೂದ್ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಹಫೀಝಾ ಕಲಿಯುತ್ತಿದ್ದರು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸದಲ್ಲಿ ತೊಡಗಿಸಿ ಕೊಂಡಿದ್ದ ಆಕೆ ಬಳಿಕ ಮಲಗಲು ಹೋಗಿದ್ದಾಳೆ . ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಮನೆಯವರು ಎಬ್ಬಿಸಲು ಹೋದಾಗ ಹಫೀಝಾ ಇಹಲೋಕ ತ್ಯಜಿಸಿದ್ದಳು. ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್‌ನ ಹಳೇ ವಿದ್ಯಾರ್ಥಿನಿಯಾಗಿದ್ದ ಹಫೀಝಾ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. .

Related Posts

Scroll to Top