ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಮಂಗಳೂರು : ಅವಳಿ ಕೊಲೆ ಕೇಸ್ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಮಂಗಳೂರು : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.

ಹಮೀದ್  ಚೂರಿ ಇರಿತಕ್ಕೊಳಗಾದ ವ್ಯಕ್ತಿ.

ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳು ಹಮೀದ್ನನ್ನು ಕೂಡಲೇ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನ ಖ್ಯಾತ ಈಜುಪಟು ಜಾವೇದ್ ಎಂಬಾತನಿಂದ ಕೃತ್ಯ ಶಂಕೆ

ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಹಣದ ವಿಚಾರವಾಗಿ ಕೃತ್ಯ ನಡೆದಿರುವ ಬಗ್ಗೆ ಅನುಮಾನ ಮೂಡಿದ್ದು, ಮಂಗಳೂರಿನ ಖ್ಯಾತ ಈಜುಪಟು ಜಾವೇದ್ ಎಂಬಾತನಿಂದ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.

13 ವರ್ಷದ ಹಿಂದೆ ನಡೆದಿತ್ತು ಪಂಜಿಮೊಗರು ಜೋಡಿ ಕೊಲೆ

ಪಂಜಿಮೊಗರಿನಲ್ಲಿ 2011ರ ಜೂ.28ರಂದು ಮಧ್ಯಾಹ್ನ ಚೂರಿಯಿಂದ ತಿವಿದು ತಾಯಿ ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ಈ ಘಟನೆ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಆದರೆ, ಈ ಘಟನೆ ನಡೆದು 13 ವರ್ಷ ಕಳೆದರೂ ಹತ್ಯೆ ಆರೋಪಿಗಳು ಪತ್ತೆಯಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿಲ್ಲ.

ಮೃತ ರಜಿಯಾಳ ಪತಿ, ಸದ್ಯ ಕೊಲೆ ಯತ್ನಕ್ಕೆ ಒಳಗಾದ ಹಮೀದ್ ಪಿ.ಎಂ. ವಿರುದ್ದವೂ ಆರೋಪ ಕೇಳಿ ಬಂದಿತ್ತು. ಪತಿ‌ ಹಮೀದ್ ಮನೆಯಿಂದ ಹೊರ ಹೋದ 30 ನಿಮಿಷದ ಬಳಿಕ ಹತ್ಯೆಯಾಗಿತ್ತು. ಆದರೆ, ಸ್ಥಳೀಯ ಪೊಲೀಸರು ಹಾಗೂ ಸಿಐಡಿ ತನಿಖೆ ವೇಳೆ ಹಮೀದ್ ಕೈವಾಡ ಇಲ್ಲ ಎಂದಾಗಿತ್ತು. ಅಲ್ಲದೇ ಪತಿ ಹಮೀದ್ ಮಂಪರು ಪರೀಕ್ಷೆಗೂ ಆಗ್ರಹಿಸಿದ್ದರು. ಇದೀಗ ಉಳ್ಳಾಲದಲ್ಲಿ ಹಮೀದ್ಗೆ ಚೂರಿ ಇರಿದು ಹತ್ಯೆಗೆ ಯತ್ನಿಸಲಾಗಿದೆ.

Related Posts

Scroll to Top