ಹರೀಶ್ ಪೂಂಜಾ ಮನೆಗೆ ಪೊಲೀಸರ ಜಮಾವಣೆ ; ಬಂಧನ ಸಾಧ್ಯತೆ ..!!

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಇಂದು ಅಧಿಕಾರಿಗಳು ಅವರ ನಿವಾಸಕ್ಕೆ ಆಗಮಿಸಿದ ಬಗ್ಗೆ ವರದಿಯಾಗಿದೆ.

ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳು ನಿವಾಸಕ್ಕೆ ಆಗಮಿಸಿದರು.

ಪೊಲೀಸ್ ಠಾಣೆಗೆ ಅಕ್ರಮ ಪ್ರವೇಶ ಮಾಡಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಒಂದು ಪ್ರಕರಣ ಹಾಗೂ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಇನ್ನೊಂದು ಪ್ರಕರಣ ದಾಖಲಾಗಿದೆ.

ಈ ಬಗ್ಗೆ ತಿಳಿಯುತ್ತಲೇ ಹಲವಾರು ಕಾರ್ಯಕರ್ತ ಹರೀಶ್ ಪೂಂಜ ನಿವಾಸಕ್ಕೆ ಆಗಮಿಸಿದ್ದು, ಸರಕಾರದ ವಿರುದ್ಧ ಹಾಗೂ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Scroll to Top