ಕುಂದಾಪುರ: 43 ದಿನದ ಹಸುಗೂಸು ಎದೆ ಹಾಲು ಕುಡಿದ ಬಳಿಕ ಸಾವು

ಕುಂದಾಪುರ, ಜೂ. 19: ಕೇವಲ 43 ದಿನದ ಹಸುಗೂಸು ತಾಯಿ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ.

ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

You cannot copy content from Baravanige News

Scroll to Top