ಕಾಸರಗೋಡು : ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್‌ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ.

ಬಂಬ್ರಾಣ ಉಜಾರು ನಿವಾಸಿ ದಿ. ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್‌ ಶೆಟ್ಟಿ (32) ಮೃತ ಯುವಕ.

ಜೂ.24 ರಂದು ರಾತ್ರಿ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಅಜಿತ್‌ ಸಾವನ್ನಪ್ಪಿದ್ದಾರೆ.

ಅಜಿತ್ ಕತಾರ್‌ನಲ್ಲಿ ಉದ್ಯೋಗದಲ್ಲಿದ್ದರು. ಜೂ.22ರಂದು ಊರಿಗೆ ಬಂದಿದ್ದರು. ಜೂ.23 ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಡೆದಿತ್ತು. ಜೂ.24ರಂದು ರಾತ್ರಿ ಕುಂಬಳೆ ಪೇಟೆಗೆ ಬಂದ ಅಜಿತ್‌ ಆಹಾರ ವಸ್ತುಗಳನ್ನು ಖರೀದಿಸಿ ಬುಲೆಟ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿ ಶ್ರೀ ಹನುಮಾನ್‌ ದೇವಸ್ಥಾನ ಸಮೀಪ ಬೈಕ್‌ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಹಾಗೂ ಇತರ ಪ್ರಯಾಣಿಕರು ಕುಂಬಳೆಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಲುಪಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

ಮೃತರು ತಾಯಿ, ಪತ್ನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top