ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು

ಬೆಂಗಳೂರು, ಆ. 07: ಪೂಜೆ ಮುಗಿಸಿ ವಾಪಸ್ ಆಗುವಾಗ ಬೈಕ್ಗೆ ಲಾರಿ ಗುದ್ದಿದ ಪರಿಣಾಮ 7 ತಿಂಗಳ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ನೆಲಮಂಗಲದ ತೋಟನಹಳ್ಳಿ ಗ್ರಾಮದ ನಿವಾಸಿ ಸಿಂಚನಾ ಮೃತ ಮಹಿಳೆ.

ಗಂಡ ಮಂಜುನಾಥ್ ಜೊತೆ ಮೃತ ಸಿಂಚನಾ, ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ತಮ್ಮ ಮನೆಗೆ ಬೈಕ್​​ನಲ್ಲಿ ವಾಪಸ್ ಆಗುತ್ತಿದ್ದರು. ದಾಬಸ್​ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎಡೆಹಳ್ಳಿ ಮಾರ್ಗವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಜಲ್ಲಿ ತುಂಬಿಕೊಂಡು ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಬೆಂಜ್ ಲಾರಿ, ಬೈಕ್​ಗೆ ಭೀಕರವಾಗಿ ಡಿಕ್ಕಿಯಾಗಿದೆ. ಇದರಿಂದ ಕೆಳಗೆ ಬಿದ್ದ 7 ತಿಂಗಳು ಗರ್ಭಿಣಿ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ ಹರಿದ ಪರಿಣಾಮ ಗರ್ಭಿಣಿ ಹೊಟ್ಟೆಯಿಂದ ಮಗು ಹೊರಗೆ ಬಂದಿದ್ದು ಇದನ್ನು ನೋಡಲು ನನ್ನಿಂದ ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ. ಪತ್ನಿಯ ಸಾವು ಕಣ್ಣಾರೆ ಕಂಡ ಗಂಡನ ಗೋಳು ಹೇಳತೀರದಾಗಿದೆ.

ಬೈಕ್​ಗೆ ಲಾರಿ ಗುದ್ದಿದ ಬಳಿಕ ಡ್ರೈವರ್ ಲಾರಿ ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕಳೆದ 6 ತಿಂಗಳಲ್ಲಿ ನೆಲಮಂಗಲ ಸಂಚಾರಿ​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top