ಮಳಲಿ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ: ದೇವರ ಅನುಗ್ರಹಕ್ಕಾಗಿ ಹೋಮ ನೆರವೇರಿಸಿದ ವಿ.ಹೆಚ್.ಪಿ

ಮಂಗಳೂರು: ಮಳಲಿ ಮಸೀದಿ ವಿವಾದ ಪ್ರಕರಣ ಸಂಬಂಧಿಸಿದಂತೆ ದರ್ಗಾವಿದ್ದ ಜಾಗದಲ್ಲಿ ಮಂದಿರವಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿ ಇಂದು ವಿಶ್ವ ಹಿಂದೂ ಪರಿಷತ್ ಮಹಾ ಗಣಯಾಗ ನೆರವೇರಿಸಿದೆ.

ಮಂದಿರ ನಿರ್ಮಾಣಕ್ಕೆ ಗಣಪತಿ ಹೋಮ ಮಾಡುವ ಮೂಲಕ ಸಂಕಲ್ಪ ಮಾಡಿದ್ದಾರೆ.

ದರ್ಗಾವಿದ್ದ ಜಾಗದಲ್ಲಿ ತಂತ್ರಿಗಳು ಈ ಹಿಂದೆ ತಾಂಬೂಲ ಪ್ರಶ್ನೆ ನಡೆಸಿದ್ದರು. ತಾಂಬೂಲ ಪ್ರಶ್ನೆಯಲ್ಲಿ ದೇವಾಲಯ ನಿರ್ಮಾಣಕ್ಕೆ ದೇವರ ಅನುಗ್ರಹ ಬೇಕೆಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡರು 108 ಕಾಯಿಯ ಮಹಾ ಗಣಯಾಗ ನೆರವೇರಿಸಿದ್ದಾರೆ.





ವಿಹೆಚ್ಪಿ ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಮಹಾ ಗಣಯಾಗ ನೆರವೇರಿಸಿದೆ. ಈ ಮಹಾ ಗಣಯಾಗದಲ್ಲಿ ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ ಭಾಗಿಯಾಗಿದ್ದರು.



ಏನಿದು ಮಳಲಿ ಮಸೀದಿ ವಿವಾದ ಪ್ರಕರಣ..!??

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿಯಲ್ಲಿ ಮಸೀದಿಯನ್ನು ನವೀಕರಣಕ್ಕೆಂದು ಕೆಡವಿದಾಗ ಹಿಂದೂ ದೇಗುಲ ಹೋಲುವಂತಹ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಬಳಿಕ ಈ ವಿಚಾರ ಬೆಳಕಿಗೆ ಬಂದಂತೆ ಕೋರ್ಟ್ ಮೊರೆಹೋಯಿತು.

ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.

You cannot copy content from Baravanige News

Scroll to Top