ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ : ಇನ್ನೇನಿದ್ದರೂ ಮನೆ ಬಾಗಿಲ ಪ್ರಚಾರ:

ಬೆಂಗಳೂರು: ದೇಶದ ಗಮನ ಸೆಳೆದ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮೇ 8 ಕೊನೆಯ ದಿನವಾಗಿದ್ದು, ಸಂಜೆ 6ಕ್ಕೆ ಬಹಿರಂಗ ಅಖಾಡಕ್ಕೆ ತೆರೆ ಬೀಳಲಿದೆ. ಬಳಿಕ “ಮೌನ ಅವಧಿ’ ಜಾರಿಗೆ ಬರಲಿದ್ದು, ಅನಂತ ರ “ಮನೆ ಬಾಗಿಲ’ ಪ್ರಹಸನ ನಡೆಯಲಿದೆ.

ಮತದಾರನ ಮನ ಗೆದ್ದು ರಾಜ್ಯದ ಗದ್ದುಗೆ ಏರಲು ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಒಂದು ತಿಂಗಳಿನಿಂದ ಇನ್ನಿಲ್ಲದ ಕಸರತ್ತುಗಳನ್ನು ನಡೆಸಿವೆ.

ಮತದಾನ ಮೇ.10 ರಂದು ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಅದಕ್ಕಿಂತ 48 ತಾಸು ಮುನ್ನ ಬಹಿರಂಗ ಪ್ರಚಾರ ಅಂತ್ಯ ಗೊಳ್ಳಬೇಕು. ಈ 48 ತಾಸು ಅವಧಿ ಯನ್ನು “ಮೌನ ಅವಧಿ” ಎನ್ನಲಾಗುತ್ತದೆ. ಈ ಅವಧಿಯಲ್ಲಿ ಬಹಿರಂಗ ಪ್ರಚಾರಕ್ಕೆ ಅವಕಾಶವಿಲ್ಲ. ಪಕ್ಷದ ಸ್ಟಾರ್‌ ಪ್ರಚಾರಕರು ಮತ್ತು ಕ್ಷೇತ್ರದ ಮತದಾರಲ್ಲದವರು ಮೇ 8ರ ಸಂಜೆ 6ರ ಬಳಿಕ ಕ್ಷೇತ್ರ ಬಿಟ್ಟು ತೆರಳಬೇಕು.

ಮೇ 8ರ ಸಂಜೆ 6ರಿಂದ ಮೇ 10ರಂದು ಮತದಾನದ ಅವಧಿ ಮುಕ್ತಾಯವಾಗುವ ತನಕ “ಸೈಲೆಂಟ್‌ ಪಿರಿಯಡ್‌’, “ಡ್ರೈ ಡೇ’ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಬಹಿರಂಗ ಪ್ರಚಾರ ಮತ್ತು ಧ್ವನಿವರ್ಧಕಗಳ ಬಳಕೆಗೆ ನಿಷೇಧವಿರುತ್ತದೆ. ಜೊತೆಗೆ ಪ್ರತೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗುತ್ತದೆ.

5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ. ಆದರೆ ಮನೆ- ಮನೆ ಪ್ರಚಾರಕ್ಕೆ ಇದು ಅನ್ವಯವಾಗುವುದಿಲ್ಲ. ಮನೆ-ಮನೆ ಪ್ರಚಾರದ ವೇಳೆಯಲ್ಲೂ ಚುನಾವಣ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಪ್ರತಿಸ್ಪರ್ಧಿಗಳ ಬಗ್ಗೆ ವೈಯಕ್ತಿಕ ಟೀಕೆ, ನಿಂದನೆ ಮಾಡುವಂತಿಲ್ಲ, ದ್ವೇಷದ ಮಾತುಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮಾತುಗಳಿಗೆ ನಿರ್ಬಂಧವಿರಲಿದೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top