ಮತಗಟ್ಟೆ ಬಳಿ ಪ್ರಚಾರದ ಆರೋಪ; ಜನಾರ್ದನ ರೆಡ್ಡಿ ವಿರುದ್ದ ಪ್ರಕರಣ ದಾಖಲು..!

ಕೊಪ್ಪಳ, ಮೇ11: ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ವಿರುದ್ದ ಪ್ರಕರಣ ದೂರು ದಾಖಲಾಗಿದ್ದು,ವಿಧಾನಸಭಾ ಚುನಾವಣೆಯ ಸಂದರ್ಭ ಮತಗಟ್ಟೆಯ ಬಳಿ ಪ್ರಚಾರ‌ ಮಾಡಿದ ಆರೋಪದ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗಾವತಿ ಕ್ಷೇತ್ರದ ಲಕ್ಷ್ಮಿಕ್ಯಾಂಪ್‌ನ ನಿಷೇಧಿತ ಪ್ರದೇಶದಲ್ಲಿ ರೆಡ್ಡಿ ಪ್ರಚಾರ ಮಾಡಿದ್ದಾರೆಂದು ಕ್ಷೇತ್ರದ ಚುನಾವಣಾ ಅಧಿಕಾರಿ ಸನಿತ್‌ ಸಿ ಆರೋಪಿಸಿ ದೂರು ನೀಡಿದ್ದಾರೆ. ಹೀಗಾಗಿ ರೆಡ್ಡಿ ವಿರುದ್ಧ ಕೊಪ್ಪಳದ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಒಂದು ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Scroll to Top