ಉಡುಪಿ, ಜು 06: ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.7 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.