ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಸ್ವಾಗತಿಸಿದ ಬೈಂದೂರಿನ ಬಿಜೆಪಿ ಶಾಸಕ

ಬೆಂಗಳೂರು,ಜು.17: ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಸ್ವಾಗತಿಸಿದರು.

ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಚರ್ಚೆ ನಡೆಯಿತು. ಚರ್ಚೆಯಲ್ಲಿ ವಿರೋಧ ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಕ್ಸಮರ ನಡೆಯಿತು.

ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ, ಅನ್ನಭಾಗ್ಯ ಯೋಜನೆಯನ್ನ ಸ್ವಾಗತಿಸಿದರು. ಯೋಚನೆ ಮತ್ತು ಯೋಜನೆ ರೂಪಿಸಿದವರಿಗೆ ಅಭಿನಂದನೆ, ಬಡವರ ಹೊಟ್ಟೆ ತುಂಬಿಸುವ ಯೋಜನೆ. ಯಾವುದೇ ಸರ್ಕಾರ ಈ ಯೋಜನೆ ಜಾರಿ ಮಾಡಿರಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ನುಡಿದರು.

Scroll to Top