ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು

ಮಂಗಳೂರು: ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮಾಡಿದ  ಇಬ್ಬರನ್ನು ಮಂಗಳೂರು ಮೂರನೇ ಹೆಚ್ಚುವರಿ ಮ್ಯಾಜಿಷ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಮಂಗಳೂರಿನ‌ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್ ಯಾನೆ ದೀಕ್ಷಿತ್ ಅಳಪೆ (32) ಮತ್ತು  ಅಳಪೆ ಬಜಾಲ್ ನ ಲಾಯ್ಡ್ ಪಿಂಟೋ (32) ಎಂಬ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

ಮಂಗಳೂರಿನ ವಕೀಲರಾದ ಶ್ರೇಯಸ್ ಎಸ್ ಕೆ ಮತ್ತು ಹರ್ಷಿತ್ ಶಕ್ತಿನಗರ ವಾದಿಸಿದರು.

Scroll to Top