‘ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ, ಕಾಂಗ್ರೆಸ್ ಸೇರುತ್ತಿದ್ದೇನೆ’ – ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ

ಉಡುಪಿ : ಆಪರೇಶನ್ ಹಸ್ತ ಜಾರಿಯಲ್ಲಿದೆ ಅನ್ನೋದನ್ನು ಉಡುಪಿ ಬೈಂದೂರು ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಪ್ರೂವ್ ಮಾಡಿದ್ದಾರೆ.

ಇಂದು ತಮ್ಮ ನಿವಾಸದಲ್ಲಿ ಮಾತಾಡಿದ ಶೆಟ್ಟಿ, ಡಿಕೆ ಶಿವಕುಮಾರ್ ತನೆಗ 2-3 ಬಾರಿ ಕರೆ ಮಾಡಿದ್ದಾರೆ ಮತ್ತು ತಾನು ಕಾಂಗ್ರೆಸ್ ಸೇರಲಿರುವುದು ನಿಶ್ಚಿತ ಎಂದು ಹೇಳಿದರು.

ತಮ್ಮ ನಿರ್ಧಾರದ ಹಿಂದೆ ಬೇರೆ ಕಾರಣಗಳೂ ಇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೈಂದೂರು ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಬಿಜೆಪಿ ಪ್ರಬಲಗೊಳ್ಳುವಂತೆ ಮಾಡಿದ್ದರೂ ಕಳೆದ ಸಲ ತನಗೆ ಟಿಕೆಟ್ ನೀಡಲಿಲ್ಲ. ಬಿಜೆಪಿಯಲ್ಲಿ ಬೆಳೆಯುವ ಅವಕಾಶವಿಲ್ಲ, ಕಾಲೆಳೆಯುವವರ ಸಂಖ್ಯೆಯೇ ಜಾಸ್ತಿ ಎಂದು ಅವರು ಹೇಳಿದರು.

ಚುನಾವಣೆ ಮುಗಿದು 4 ತಿಂಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನ್ನು ಆರಿಸಲಾಗದ ಮತ್ತು ಪಕ್ಷದ ರಾಜ್ಯ ಘಟಕಕ್ಕೆ ಅಧ್ಯಕ್ಷನನ್ನು ನೇಮಕ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ ಎಂದ ಶೆಟ್ಟಿ, ಮುಂಬರುವ ದಿನಗಳಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಸಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಮಕ್ಷಮದಲ್ಲಿ ಕಾಂಗ್ರೆಸ್ ಸೇರುವುದಾಗಿ ಹೇಳಿದರು.

You cannot copy content from Baravanige News

Scroll to Top