ಕುಂದಾಪುರ: ವ್ಯಕ್ತಿಯೋರ್ವರಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಕುಂದಾಪುರ, ಅ.02: ಕಾರಿನಲ್ಲಿ ಬಂದ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ತೊಡೆಗೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.

ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಚೂರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದವರು.

ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಚೂರಿ ಇರಿತಕ್ಕೊಳಗಾದ ರಾಘವೇಂದ್ರ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ ಕುಂದಾಪುರದ ಚಿಕ್ಕನ್ ಸ್ಟಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿ ಎದುರು ಹಲ್ಲೆ ನಡೆದಿದೆ.

ರಾಘವೇಂದ್ರ ಅವರು ತನ್ನ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ತಗಾದೆ ತೆಗೆದು ಚೂರಿಯಲ್ಲಿ ರಾಘವೇಂದ್ರ ಅವರಿಗೆ ಇರಿದು ಕಾರಿನಲ್ಲಿ ಪರಾರಿಯಾಗಿದ್ದಾನೆಂದು ತಿಳಿದು ಬಂದಿದೆ. ಘಟನೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ.

Scroll to Top