ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ವಾರಂಬಳ್ಳಿ ಗ್ರಾಮದ ತೆಂಕುಬಿರ್ತಿಯ ಅಂಬೇಡ್ಕರ್ ಭವನದಲ್ಲಿ ಮದ್ಯಪಾನ ಪಾರ್ಟಿ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ.
ಶ್ಯಾಮರಾಜ್ ಬಿರ್ತಿ, ಸುರೇಶ್, ಶಿವ, ಪ್ರಶಾಂತ್ ಅವರು ಸ್ನೇಹಿತರೊಂದಿಗೆ ಸೇರಿ ಪಂಚಾಯತ್ ಅಥವಾ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಅಂಬೇಡ್ಕರ್ ಭವನಕ್ಕೆ ಅತಿಕ್ರಮ ಪ್ರವೇಶ ಮಾಡಿ ಭವನವನ್ನು ದುರುಪಯೋಗ ಪಡಿಸಿಕೊಂಡು ಕಾನೂನು ಬಾಹಿರವಾಗಿ ಮದ್ಯಪಾನ ಮಾಡಿರುವುದಾಗಿ ಸವಿತಾ ವಾರಂಬಳ್ಳಿ ಆರೋಪಿಸಿದ್ದಾರೆ.
ಘಟನೆಯ ವೀಡಿಯೋ ಮಾಡಲು ಹೋದಾಗ ಆರೋಪಿಗಳು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಸವಿತಾ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಬೇಡ್ಕರ್ ಭವನದಲ್ಲಿ ಮದ್ಯಪಾನ ಪಾರ್ಟಿ ಮಾಡಿದ ಕುರಿತು ಪ್ರಕರಣ ದಾಖಲು
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »