ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ಹಸುರು ಪಟಾಕಿಯ ದೀಪಾವಳಿ : ರಾಜ್ಯ ಸರಕಾರ ಆದೇಶ

ಉಡುಪಿ : ಈ ಬಾರಿ ದೀಪಾವಳಿಗೆ ಹಸುರು ಪಟಾಕಿಗಳನ್ನು ಬಳಕೆ ಮಾಡುವಂತೆ ರಾಜ್ಯ ಸರಕಾರ ಆದೇಶಿಸಿದ್ದು, ಎಲ್ಲ ಕಡೆಯೂ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಈ ನಡುವೆ ಮಾರಾಟಗಾರರು ಹಾಗೂ ಗ್ರಾಹಕರಿಗೆ ಸಾಂಪ್ರದಾಯಿಕ ಪಟಾಕಿಗಳು ಹಾಗೂ ಹಸುರು ಪಟಾಕಿಗಳ ಬಗ್ಗೆ ಗೊಂದಲ ಉಂಟಾಗುತ್ತಿದೆ.ಕಡಿಮೆ ಅಪಾಯಕಾರಿ ಮತ್ತು ಹೆಚ್ಚು ಹಾನಿಕಾರಕವಲ್ಲದ ರಾಸಾಯನಿಕಗಳಿಂದ ಇದನ್ನು ತಯಾರಿಸಲಾಗುತ್ತದೆ. ಇದರಲ್ಲಿ ಹಸುರು ಲೋಗೋ ಹಾಗೂ ಕ್ಯುಆರ್‌ ಕೋಡ್‌ ಅಳವಡಿಸಲಾಗಿದೆ. ಸಾಮಾನ್ಯ ಪಟಾಕಿಗಳಲ್ಲಿ ನೈಟ್ರೇಟ್‌ ಮತ್ತು ಬೇರಿಯಂಗಳು ಕಂಡುಬರುತ್ತವೆ. ಹಸುರು ಪಟಾಕಿಗಳು ಸ್ಫೋಟಿಸಿದಾಗ ನೀರಿನ ಆವಿ ಮತ್ತು ಹೊಗೆ ಹೊರ ಹಾಕುವುದನ್ನು ದುರ್ಬಲಗೊಳಿಸುತ್ತದೆ.

ಹಸುರು ಪಟಾಕಿಗಳು ಗಾತ್ರದಲ್ಲಿಯೂ ಸಣ್ಣದಾಗಿದ್ದು, ಮಾಲಿನ್ಯದ ಪ್ರಮಾಣ ಶೇ. 30ರಿಂದ 90 ಪ್ರತಿಶತ ಕಡಿಮೆಯಾಗಿದೆ.

ಸಾಂಪ್ರದಾಯಿಕ ಪಟಾಕಿಗಳಿಗಿಂತ ಹಸುರು ಪಟಾಕಿಗಳು ಕಡಿಮೆ ಗಾತ್ರದಲ್ಲಿರುತ್ತವೆ. ಸಾಂಪ್ರದಾಯಿಕ ಪಟಾಕಿಗಳ ತಯಾರಿಕೆಯಲ್ಲಿ ಉಪಯೋಗಿಸುವ ವಿವಿಧ ರಾಸಾಯನಿಕಗಳ ಪ್ರಮಾಣವು ಹಸುರು ಪಟಾಕಿಗಳಲ್ಲಿ ಶೇ. 30ರಷ್ಟು ಕಡಿಮೆ ಪ್ರಮಾಣದಲ್ಲಿರುತ್ತದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಹೊರಸೂಸುವ ರಾಸಾಯನಿಕಯುಕ್ತ ಹೊಗೆ, ಧೂಳು ಕಡಿಮೆ ಮಾಡುವ ಸಂಯೋಜಕವನ್ನು ಹಸುರು ಪಟಾಕಿ ತಯಾರಿಸುವ ಪ್ರಕ್ರಿಯೆಯಲ್ಲಿ ಸೇರಿಸುವುದರಿಂದ ವಾತಾವರಣದಲ್ಲಿ ಪರಿವೇಷ್ಠಕ ವಾಯುವಿನಲ್ಲಿನ ಗಾಳಿಯಲ್ಲಿ ತೇಲಾಡುವ ಧೂಳಿನ ಕಣಗಳು, ಎಸ್‌ಒ2 ಮತ್ತು ಎನ್‌ಒ2 ಅಂಶಗಳ ಪ್ರಮಾಣ ಶೇ. 30ರಷ್ಟು ಕಡಿಮೆಯಾಗಲಿದೆ. ವಾತಾವರಣದಲ್ಲಿ ಮಾಲಿನ್ಯವಾಗುವುದನ್ನು ತಡೆಗಟ್ಟುವ ಸಂಬಂಧ ಸರಕಾರ ಕ್ರಮ ಕೈಗೊಂಡಿದ್ದು, ಪೆಟ್ರೋಲಿಯಂ ಎಕ್ಸ್‌ಪ್ಲೋಸಿವ್‌ ಸೇಫ್ಟಿ ಆರ್ಗನೈಸೇಶನ್‌ ಅವರು ಅನುಮೋದಿಸಿದ ಘಟಕಗಳಲ್ಲಿ ತಯಾರಾದ ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರಕಾರದ ಆದೇಶದ ಮೇರೆಗೆ ಈ ಬಾರಿ ಹಸುರು ಪಟಾಕಿಗಳ ಉಪಯೋಗಕ್ಕೆ ಆದ್ಯತೆ ನೀಡಲಾಗಿದೆ. ಇದನ್ನು ಹೊರತು ಇತರ ಪಟಾಕಿ ಬಳಸುವುದು ಕಂಡುಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
-ರಾಜು,
ಜಿಲ್ಲಾ ಪರಿಸರ ಅಧಿಕಾರಿ

Related Posts

Scroll to Top